ಆರ್ಟಿಕಲ್ 370 ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಸೆ.30ರೊಳಗೆ ಜಮ್ಮು-ಕಾಶ್ಮೀರ ಚುನಾವಣೆ ನಡೆಸಲು ಆದೇಶ

Waves of Karnataka

 ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸುವ (J &K and Ladakh) ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (Chief Justice of India) ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಸೋಮವಾರ ತೀರ್ಪು ಪ್ರಕಟಿಸಿತು. ಅವರು 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ 'ದುರುದ್ದೇಶಪೂರಿತ' ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಹಿಂದಿನ ಜಮ್ಮು ಮತ್ತು ಕಾಶ್ಮೀರ (J&K) ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ಕೇಂದ್ರವು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 23 ಅರ್ಜಿಗಳ ಮೇಲೆ ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ತನ್ನ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿತು.