ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, 7 ಸಾವಿರಕ್ಕೂ ಹೆಚ್ಚು ಜನರಿಗೆ ಆಹ್ವಾನ ಪತ್ರಿಕೆಗಳನ್ನು ಕಳುಹಿಸಿದೆ.

Waves of Karnataka


 ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಶ್ರೀರಾಮನ ಮೂರ್ತಿಯನ್ನು ಸ್ಥಾಪಿಸುವ ಧಾರ್ಮಿಕ ಕಾರ್ಯಕ್ಕೆ ವಿವಿಧ ಕ್ಷೇತ್ರಗಳ ತಾರೆಯರಿಗೆ ಆಹ್ವಾನ ನೀಡಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, 7 ಸಾವಿರಕ್ಕೂ ಹೆಚ್ಚು ಜನರಿಗೆ ಆಹ್ವಾನ ಪತ್ರಿಕೆಗಳನ್ನು ಕಳುಹಿಸಿದೆ. ಇದರಲ್ಲಿ ದೇಶದ ವಿವಿಧ ಭಾಗಗಳ ಸುಮಾರು 3 ಸಾವಿರ ವಿವಿಐಪಿಗಳು, 4 ಸಾವಿರ ಸಂತರು ಹಾಗೂ ಸನ್ಯಾಸಿಗಳು, 50 ದೇಶಗಳ ಪ್ರತಿನಿಧಿಗಳು ಮತ್ತು ರಾಮ ಮಂದಿರ ಚಳವಳಿಯಲ್ಲಿ ಭಾಗಿಯಾಗಿದ್ದ ಕರ ಸೇವಕರ ಕುಟುಂಬದ ಸದಸ್ಯರು ಸೇರಿದ್ದಾರೆ.

"ಬಾಲಿವುಡ್ ಅಥವಾ ಕ್ರೀಡಾ ಸೆಲೆಬ್ರಿಟಿಗಳು, ಕಾರ್ಪೊರೇಟ್ ದಿಗ್ಗಜರು, ವಿಜ್ಞಾನಿಗಳು, ನ್ಯಾಯಾಧೀಶರು, ಪತ್ರಕರ್ತರು, ರಾಜಕಾರಣಿಗಳು, ಸಂತರು ಅಥವಾ ಸನ್ಯಾಸಿಗಳು ಸೇರಿದಂತೆ ನಾವು ಎಲ್ಲಾ ವಲಯಗಳ ಖ್ಯಾತನಾಮ ವ್ಯಕ್ತಿಗಳನ್ನು ಆಹ್ವಾನಿಸುವಂತೆ ಖಾತರಿ ವಹಿಸಿದ್ದೇವೆ. ಇದಲ್ಲದೆ, ಕವಿಗಳು, ಗಾಯಕರು ಮತ್ತು ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಿಗೆ ಕೂಡ ಜನವರಿ 22ರಂದು ನಿಗದಿಯಾಗಿರುವ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ" ಎಂದು ಅಯೋಧ್ಯಾದ ವಿಶ್ವ ಹಿಂದೂ ಪರಿಷದ್‌ನ ಪ್ರಾದೇಶಿಕ ವಕ್ತಾರ ಶರದ್ ಶರ್ಮಾ ತಿಳಿಸಿದ್ದಾರೆ.