ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಲಾಗಿದ್ದ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
December 22, 2023
ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಲಾಗಿದ್ದ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಹೇಳಿದರು.
Tags
