ಅಯೋಧ್ಯೆಯ ರಾಮಮಂದಿರ ದೇಗುಲದ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಲಾಗಿದೆ. ಆಹ್ವಾನ ಸ್ವೀಕರಿಸಿದ ನನಗೆ ತುಂಬಾ ಸಂತೋಷ ಆಗಿದೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

Waves of Karnataka


 ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಆಹ್ವಾನಿಸಲಾಗಿದೆ. ರಾಮ ದೇಗುಲ ಅಭಿವೃದ್ಧಿ ಕಮಿಟಿಯ ಅಧ್ಯಕ್ಷ ಎನ್​.ಮಿಶ್ರಾ, ಆರ್.ಎಸ್.ಎಸ್​ ಹಿರಿಯ ನಾಯಕರಾದ ರಾಮ್​ ಲಾಲ್ ಹಾಗೂ ವಿಹೆಚ್ ಪಿಯ ಹಿರಿಯ ನಾಯಕರಾದ ಅಲೋಕ್​ ಕುಮಾರ್​ ದೆಹಲಿಯ ಹೆಚ್​ಡಿಡಿ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಈ ವಿಚಾರವನ್ನು ಟ್ವೀಟ್ ಮೂಲಕ ದೇವೇಗೌಡರು ಹಂಚಿಕೊಂಡಿದ್ದಾರೆ.

ಅಯೋಧ್ಯೆಯ ರಾಮಮಂದಿರ ದೇಗುಲದ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಲಾಗಿದೆ. ಆಹ್ವಾನ ಸ್ವೀಕರಿಸಿದ ನನಗೆ ತುಂಬಾ ಸಂತೋಷ ಆಗಿದೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.  ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಅತ್ಯಂತ ಜಾತ್ಯತೀತ ನಾಯಕ ಎಂದು ಪರಿಗಣಿಸಲ್ಪಟ್ಟ ದೇವೇಗೌಡರು ಈಗ ಕೇಸರಿ ಪಾಳೆಯದ ಮಿತ್ರರಾಗಿ ರೂಪಾಂತರಗೊಂಡಿದ್ದಾರೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಲು ಇಚ್ಛಿಸುತ್ತೇನೆ ಎಂದು ಹೇಳುತ್ತಿದ್ದ ಗೌಡರು ಈಗ ಅಂತಹ ಆಲೋಚನೆಗಳನ್ನು ತಮ್ಮೊಳಗೆ ಅದುಮಿ ಇಟ್ಟುಕೊಳ್ಳಬೇಕಾಗಬಹುದು.