ವೈಜ್ಞಾನಿಕ ಮತ್ತು ವಾಸ್ತವಾಂಶ ಆಧಾರಿತವಾಗಿ ಹೊಸದಾಗಿ ಜಾತಿ ಜನಗಣತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದ ನಿಯೋಗ ಶುಕ್ರವಾರ ಮನವಿ ಮಾಡಿಕೊಂಡಿದೆ.

Waves of Karnataka


 ವೈಜ್ಞಾನಿಕ ಮತ್ತು ವಾಸ್ತವಾಂಶ ಆಧಾರಿತವಾಗಿ ಹೊಸದಾಗಿ ಜಾತಿ ಜನಗಣತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದ ನಿಯೋಗ ಶುಕ್ರವಾರ ಮನವಿ ಮಾಡಿಕೊಂಡಿದೆ.

ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಶಾಸಕ ಶಾಮನೂರ ಶಿವಶಂಕರಪ್ಪ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಸಚಿವರು, ಶಾಸಕರ ನಿಯೋಗ ಸಿದ್ದರಾಮಯ್ಯ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಭೇಟಿ ಮಾಡಿ, ಮನವಿ ಸಲ್ಲಿಸಿತು.

ನಿಯೋಗದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ, ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಎಂ. ಪಟ್ಟಣ ಇದ್ದರು.