ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿಯಲ್ಲಿ ಈಗ ಸಂಗಣ್ಣ ಹಾಗು ಕೆ ಬಸವರಾಜ ಮಧ್ಯೆ ಪೈಪೋಟಿ ಏರ್ಪಟ್ಟಿದೆ.

Waves of Karnataka


 ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿಯಲ್ಲಿ ಈಗ ಸಂಗಣ್ಣ ಹಾಗು ಕೆ ಬಸವರಾಜ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಇಬ್ಬರು ಚುನಾವಣೆಗೆ ಸಿದ್ದತೆ ನಡೆಸಿದ್ದಾರೆ. ಈಗಿನ ಬಿಜೆಪಿ ಸ್ಥಿತಿಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಿ ಪಕ್ಷದಲ್ಲಿ ಗೊಂದಲ ಮಾಡಿಕೊಳ್ಳುವ ಸ್ಥಿತಿಯಲ್ಲಿಲ್ಲ ಎನ್ನಲಾಗಿದೆ. ಆದರೆ ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ಕಾರಣಕ್ಕೆ ಬಸವರಾಜರಿಗೆ ಟಿಕೆಟ್ ನೀಡಬಹುದು ಎನ್ನಲಾಗಿದೆ. ಬರುವ ದಿನಗಳಲ್ಲಿ ಈ ಬಗ್ಗೆ ಇನ್ನಷ್ಟು ಸ್ಪಷ್ಠವಾಗಲಿದೆ