ಸಂಸತ್ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೊನೆಗೂ ಮೌನ ಮುರಿದಿದ್ದು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆಂದು ಭಾನುವಾರ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಇಂದು ಬೆಳಗ್ಗೆ ಮಾತನಾಡಿರುವ ಅವರು, ದೇಶದ್ರೋಹಿನಾ, ದೇಶಪ್ರೇಮಿನಾ ಎಂಬುದನ್ನು ಬೆಟ್ಟದ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿ. ನನ್ನ ಓದುಗರು, ಮೈಸೂರು ಕೊಡಗಿನ ಜನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆಂದು ಹೇಳಿದರು.
”2024ರ ಏಪ್ರಿಲ್ನಲ್ಲಿ ನಡೆಯುವಂತಹ ಲೋಕಸಭಾ ಚುನಾವಣೆಯಲ್ಲಿ ಜನರು ನನ್ನ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಏನು ಎಂಬುದನ್ನು ಅಂತಿಮವಾಗಿ ತೀರ್ಮಾನ ಕೊಡಬೇಕಾದವರು ನನ್ನ ಕ್ಷೇತ್ರದ ಜನ. ಅದರಾಚೆಗೆ ನಾನು ಏನೂ ಹೇಳುವುದಿಲ್ಲ” ಎಂದು ತಿಳಿಸಿದರು.
