ರಾಜಧಾನಿ ಜನರಿಗೆ ಮತ್ತೊಂದು ಶಾಕ್; ನೀರಿನ ದರ ಏರಿಕೆ ಸುಳಿವು ಕೊಟ್ಟ ಸಿಎಂ

Waves of Karnataka


 ರಾಜಧಾನಿಯಲ್ಲಿ ನೀರಿನ ದರ ಏರಿಕೆ (Water Tariff Hike) ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೀರಿನ ದರ ಏರಿಕೆ ಬಗ್ಗೆ ಸುಳಿವು ನೀಡಿದ್ದಾರೆ. ನೀರಿನ ಬೆಲೆ ಏರಿಸಿದ್ದಾರೆ ಎಂದಿದ್ದಾರೆ. ಆದರೆ, ಇನ್ನೂ ಏರಿಸಿಲ್ಲ. ಆ ಬಗ್ಗೆ ಆಲೋಚನೆ ಇದೆ. ಬಹಳ ದಿನಗಳಿಂದ ನೀರಿನ ದರ ಏರಿಕೆ ಮಾಡಿಲ್ಲ ಎಂದು ಹೇಳುವ ಮೂಲಕ ದರ ಏರಿಕೆಯಾಗಲಿದೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಬಸ್ ದರ ಏರಿಕೆ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿ, ನಿಗಮದಲ್ಲಿ ಕಷ್ಟದ ಪರಿಸ್ಥಿತಿ ಇದೆ. ಅದಕ್ಕೆ ಆ ರೀತಿ ಸಚಿವರು ಮಾತನಾಡಿರಬಹುದು ಅಂತ ಅಂದುಕೊಳ್ತೇನೆ. ನೋಡುತ್ತೇವೆ, ನಾವು ಇನ್ನು ತೀರ್ಮಾನ ತೆಗೆದುಕೊಂಡಿಲ್ಲ‌ ಎಂದು ಹೇಳಿದ್ದಾರೆ.