Muda ಕೇಸ್ ತನಿಖೆ ಮತ್ತಷ್ಟು ಚುರುಕು: ಪ್ರಾಧಿಕಾರದ 6 ಸಿಬ್ಬಂದಿಗೆ ಇಡಿ ಸಮನ್ಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ

Waves of Karnataka


 ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಮಂದಿ ಸಿಬ್ಬಂದಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

6 ಮಂದಿಗೂ ಒಂದೇ ದಿನ ಅಲ್ಲದೆ, ಬೇರೆ ಬೇರೆ ದಿನಾಂಕಗಳನ್ನು ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬೆಂಗಳೂರಿನ ಇಡಿ ವಲಯ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ.

ಸಮನ್ಸ್ ಪಡೆದ 6 ಮಂದಿ ನೌಕರರು ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಂದಿಗೆ ತರುವಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ