ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಎನ್.ಜಯರಾಂ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಮತ್ತಿತರರೊಂದಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ಬೆಂಗಳೂರಿನ ಹದಗೆಟ್ಟ ರಸ್ತೆ ಹಾಗೂ ಐಟಿ ಕಾರಿಡಾರ್ ಜಲಾವೃತ ಕುರಿತ ಟ್ವೀಟ್ ಬೆನ್ನಲ್ಲೇ ಶಾ ಅವರನ್ನು ಉಪ ಮುಖ್ಯಮಂತ್ರಿ ಭೇಟಿಯಾಗಿದ್ದಾರೆ.ಇತ್ತೀಚಿಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬೆಂಗಳೂರಿನ ರಸ್ತೆ ಸರಿಪಡಿಸಲು ELCITA ಗೆ ಗುತ್ತಿಗೆ ನೀಡುವಂತೆ, ಬಿಬಿಎಂಪಿಗೆ ಗುತ್ತಿಗೆ ನೀಡದಂತೆ ಕಿರಣ್ ಮಜುಂದಾರ್ ಶಾ ಟ್ವೀಟ್ ಮಾಡಿದ್ದರು
