ಅವಕಾಶಕ್ಕಾಗಿ ತ್ಯಾಗಕ್ಕೆ ಸಿದ್ಧ: 'ನಾನು ಶಾಶ್ವತವಲ್ಲ, ಕಾಂಗ್ರೆಸ್ ಅಧಿಕಾರ ಶಾಶ್ವತ' – ಡಿಕೆಶಿ ದಿಟ್ಟ ಮಾತು

Waves of Karnataka


 ನಾನು ಶಾಶ್ವತವಾಗಿ ಇರಲು ಆಗದು, ಬೇರೆಯವರಿಗೆ ಅವಕಾಶ ನೀಡಬೇಕು. ನಾನು ಎಲ್ಲಿರುತ್ತೇನೋ ಎಲ್ಲಿ ಇರುವುದಿಲ್ಲವೋ ಎನ್ನುವುದು ಮುಖ್ಯ ಅಲ್ಲ. 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದೇ ನಮ್ಮ ಉದ್ದೇಶ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪರ್ಮನೆಂಟ್ ಆಗಿ ಇರುವುದಕ್ಕೆ ಆಗಲ್ಲ. ಕೆಪಿಸಿಸಿ ಅಧ್ಯಕ್ಷನಾಗಿ ಐದೂವರೆ ವರ್ಷವಾಯಿತು.

ಇನ್ನೂ ಸ್ವಲ್ಪ ದಿನ ಕಳೆದರೇ, ಆರು ವರ್ಷವಾಗುತ್ತೆ. ಡಿಸಿಎಂ ಆದ ತಕ್ಷಣವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಬೇಕೆಂದು ನಿರ್ಧರಿಸಿದ್ದೆ. ಆದರೇ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷನಾಗಿ ಮುಂದುವರಿಯಿರಿ ಎಂದು ಹೇಳಿದ್ದರು ಎಂಬುದಾಗಿ ತಿಳಿಸಿದ್ದಾರೆ.