ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುದ್ದೆಯಲ್ಲಿ ಮುಂದುವರಿಯುವುದಾಗಿ ಮತ್ತು ಮುಂದಿನ ರಾಜ್ಯ ಬಜೆಟ್ ಮಂಡಿಸುವುದಾಗಿ ಪುನರುಚ್ಚರಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಹುದ್ದೆ ಬದಲಾವಣೆಯ ಬಗ್ಗೆ ಮಾಡಿಕೊಂಡ ಒಪ್ಪಂದದ ಬಗ್ಗೆ ಹೈಕಮಾಂಡ್ ಗೆ ಪರೋಕ್ಷವಾಗಿ ನೆನಪಿಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತ್ಯಾಗ ಮಾಡುವ ಡಿಕೆ ಶಿವಕುಮಾರ್ ಅವರ ಹೇಳಿಕೆಯು ನಾಯಕತ್ವದ ಸಮಸ್ಯೆ ಇತ್ಯರ್ಥವಾದರೆ ಅವರು ಬಿಟ್ಟುಕೊಡಲು ಸಿದ್ಧರಿದ್ದಾರೆ ಎಂಬುದನ್ನು ಸೂಚಿಸುತ್ತದೆ. ಡಿ ಕೆ ಶಿವಕುಮಾರ್, ತಮ್ಮ ಕಿರಿಯ ಸಹೋದರ ಮತ್ತು ಬೆಂಗಳೂರು ಗ್ರಾಮೀಣ ಮಾಜಿ ಸಂಸದ ಡಿ ಕೆ ಸುರೇಶ್ ಅವರೊಂದಿಗೆ ಇತ್ತೀಚೆಗೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದಾಗ, ಅವರು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿರುವ ಬಗ್ಗೆ ಒತ್ತಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷ ಅಧಿಕಾರ ಹಿಡಿಯುವಲ್ಲಿ ತಮ್ಮ ಪಾತ್ರವನ್ನು ಎತ್ತಿ ತೋರಿಸುವ ಮೂಲಕ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನರಾಚನೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ವಿಷಯಕ್ಕೆ ಹೆಚ್ಚಿನ ಸಮಾಲೋಚನೆ ಅಗತ್ಯವಾಗಿರುವುದರಿಂದ ಮಲ್ಲಿಕಾರ್ಜುನ ಖರ್ಗೆ ಅವರು ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
