ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ಮುದ್ರೆ ಹಾಕುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಶನಿವಾರ ನವದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಸೋಮವಾರ ಮತ್ತೆ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಸಂಪುಟ ಪುನರಾಚನೆ ಕುರಿತು ಚರ್ಚಿಸಲು ಅವರು ಮಲ್ಲಿಕಾರ್ಜುನ ಖರ್ಗೆ ಮತ್ತು ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆ.
ನಾಲ್ಕು ದಿನಗಳ ನಂತರ, ಅಂತಿಮ ನಿರ್ಧಾರ ತೆಗೆದುಕೊಳ್ಳಲು ಅವರು ರಾಹುಲ್ ಗಾಂಧಿಯನ್ನು ಮತ್ತೆ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದೆ.
