ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಇತ್ಯರ್ಥವಾಗದೆ ಮುಂದುವರೆದಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ.
ಈಗಾಗಲೇ 16 ಬಜೆಟ್ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ. ಈ ತಿಂಗಳಿನಿಂದ ಬಜೆಟ್ ಗೆ ಸಿದ್ಧತೆ ನಡೆಸುವುದಾಗಿ ಗುರುವಾರ ಹೇಳಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ.
ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸಮ್ಮೇಳನ ಸಭಾಂಗಣದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.
